ಶಿವಮೊಗ್ಗ, ಮೇ.21 : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ಸ್ ವಿದ್ಯಾರ್ಥಿಗಳಿಂದ ಅರಿವು ಸಾಲ ಸೌಲಭ್ಯಕ್ಕೆ ಆನ್‍ಲೈನ್ ಅರ್ಜಿ ಸಲ್ಲಿಸುವಂತೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿಯನ್ನು ಏmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ಈ ವೆಬ್ಸೈಟ್‍ನಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಗುರುತಿನ ಚೀಟಿ, ಪಡಿತರ ಚೀಟಿ, ವಿದ್ಯಾರ್ಥಿ ಹಾಗೂ ಪೋಷಕರ ಭಾವಚಿತ್ರ, ಸಿಇಟಿ ಅಥವಾ ನೀಟ್‍ನ ಎಲ್ಲಾ ಪ್ರತಿಗಳು ಮತ್ತು ಹಾಲ್ ಟೆಕೇಟ್‍ನ ನಕಲು ಪ್ರತಿಗಳಿಗೆ ನೋಟರಿ ಮಾಡಿಸಿ ಜೂನ್-5 ರೊಳಗೆ ಅಲ್ಪಸಂಖ್ಯಾತರ ನಿಗಮದ ಜಿಲ್ಲಾ ಕಛೇರಿಗೆ ತಲುಪಿಸಲು ಸೂಚಿಸಲಾಗಿದೆ.

error: Content is protected !!