ಶಿವಮೊಗ್ಗ : ಜೂನ್ 15 : ಬೆಂಗಳೂರು ವಿಭಾಗದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜೂನ್ 16 ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಕುವೆಂಪು ಕಲಾಮಂದಿರದಲ್ಲಿ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದೆ.
ಕಾರ್ಯಕ್ರಮವನ್ನು ರಾಜ್ಯ ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸವರ ಡಿ.ಸಿ.ತಮ್ಮಣ್ಣ ಉದ್ಘಾಟಿಸುವರು. ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ಧರಾಮಯ್ಯ ಪ್ರಸ್ತಾವಿಕ ಭಾಷಣ ಮಾಡುವರು. ಹಿರಿಯ ಸಾಹಿತಿ ವಿಷ್ಣುನಾಯ್ಕ್‍ರವರಿಂದ ಹಿತನುಡಿ.
ಜಿಲ್ಲಾಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್. ಕುಮಾರ್, ಮಹಾನಗರಪಾಲಿಕೆ ಮಹಾಪೌರರಾದ ಶ್ರೀಮತಿ ಲತಾ ಗಣೇಶ್, ವಿಧಾನಸಭಾ ಸದಸ್ಯರುಗಳಾದ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಆರಗ ಜ್ಞಾನೇಂದ್ರ, ಬಿ.ಕೆ. ಸಂಗಮೇಶ್ವರ, ಕೆ.ಬಿ.ಅಶೋಕ ನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಪ್ರಸನ್ನಕುಮಾರ್, ಸಿ.ಎಂ.ಇಬ್ರಾಹಿಂ, ಆಯನೂರು ಮಂಜುನಾಥ, ಎಸ್.ಎಲ್.ಭೋಜೇಗೌಡ, ಎಸ್.ರುದ್ರೇಗೌಡ, ಮಹಾನಗರಪಾಲಿಕೆ ಮಹಾಪೌರರು ಶ್ರೀಮತಿ ಲತಾಗಣೇಶ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಎಸ್.ಪಿ.ಶೇಷಾದ್ರಿ, ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಂಡಳಿಯ ಅಧ್ಯಕ್ಷ ಟಿ.ಡಿ.ರಾಜೇಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಘ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶಿವರಾಮೇಗೌಡ, ಜಿಲ್ಲಾ ರಕ್ಷಣಾಧಿಕಾರಿ ಅಶ್ವಿನಿ, ಮಹಾನಗರಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ ನಾಯಕ್, ಸಾ.ಶಿ.ಇ., ಉಪನಿರ್ದೇಶರಿ ಸುಮಂಗಲ ಪಿ., ಪ.ಪೂ.ಶಿ.ಇ. ಉಪನಿರ್ದೇಶಕ ಹೆಚ್.ಕೆ. ಮೊಹಮ್ಮದ್ ಇಮ್ತಿಯಾಜ್, ಶಿ.ಜಿ.ಕ.ಸಾ.ಪ. ಅಧ್ಯಕ್ಷ ಡಿ.ಬಿ.ಶಂಕರಪ್ಪ, ಕ.ಅ.ಪ್ರಾ. ಸದಸ್ಯ ಗಿರೀಶ್ ಪಟೇಲ್ ಮತ್ತು ಪ್ರಭಾಕರ್ ಪಾಟೀಲ್, ಕಾರ್ಯದರ್ಶಿ ಡಾ.ಕೆ.ಮುರಳಿಧರ ಇವರುಗಳು ಉಪಸ್ಥಿತರಿರುವರು.

error: Content is protected !!