ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ, ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಶಾಸಕರಾದ ಕೆ.ಬಿ. ಅಶೋಕ ನಾಯ್ಕ  ಕೊರೋನಾ ಸೋಂಕು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು  ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಯಾರು ಕೂಡ ಭಯ ಪಡುವ ಅವಶ್ಯಕತೆ ಇಲ್ಲ, ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು. ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಿ ಎಂದು  ಸೂಚಿಸಿದರು. 
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ದೇವನಂದ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟ್ಯಾನಿ ಫರ್ನಾಂಡಿಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜನಾಯ್ಕ್,ಠಾಣಾಧಿಕಾರಿ ಸುರೇಶ್, ಮಂಡಲ ಅಧ್ಯಕ್ಷ ರಾದ ಮಂಜುನಾಥ್ ಹಾಗೂ ಆರೋಗ್ಯ ಕೇಂದ್ರ ಸಮಿತಿ ಸದಸ್ಯರು ಹಾಜರಿದ್ದರು.

error: Content is protected !!