ಶಿವಮೊಗ್ಗ, ಅಕ್ಟೋಬರ್ 07 : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮಲೆನಾಡು ಗಿಡ್ಡ ತಳಿ ಹೊಂದಿರುವ ಸಣ್ಣ ಹಿಡುವಳಿದಾರರಿಗೆ ಹುಲ್ಲುಗಾವಲು ನಿರ್ವಹಣೆ ಯೋಜನೆಯಡಿಯಲ್ಲಿ ಅ.11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗದಲ್ಲಿ ಮೇವು ಬೆಳೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತಿಯುಳ್ಳವರು ಮೊ.ಸಂ.: 9481254254 / 8310384135 ಗಳಿಗೆ ಎಸ್.ಎಂ.ಎಸ್/ವಾಟ್ಸಾಪ್ ಮಾಡಿ ನೊಂದಾಯಿಸಿಕೊಳ್ಳುವುದು ಅಥವಾ ಡಾ.ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಿ ನೋಂದಾಯಿಸಿಕೊಂಡು ತರಬೇತಿಯ ಉಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!