ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ವಿಜೇತ್‌ ಅಭಿಪ್ರಾಯ

ಶಿವಮೊಗ್ಗ : ಯಾವುದೇ ಕಾಯಿಲೆ ಬಂದ ಮೇಲೆ ಚಿಕಿತ್ಸೆ ಪಡೆದುಕೊಳ್ಳುವುದಕ್ಕಿಂತ ಬರದಂತೆ ಮುಂಜಾಗ್ರತೆ ವಹಿಸುವುದು ಒಳ್ಳೆಯದು ಎಂದು ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ವಿಜೇತ್‌ ಸಲಹೆ ನೀಡಿದರು.

ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ಗ್ಲೆನ್ಮಾರ್ಕ್ಫಾರ್ಮಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸರ್ಜಿ ಹಾಸ್ಪಿಟಲ್‌ನಲ್ಲಿ ಶುಕ್ರವಾರ ವಿಶ್ವ ಹೃದಯ ದಿನ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮನುಷ್ಯನ ದೇಹದಲ್ಲಿ ಹೃದಯವು ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಅಂಗ. ಎಲ್ಲ ವಯೋಮಾನದವರೂ ಹೃದಯ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು, ಪ್ರತಿನಿತ್ಯ ವಾಕಿಂಗ್‌, ವ್ಯಾಯಾಮ ಮಾಡುವುದು, ಮದ್ಯಪಾನ, ಧೂಮಪಾನದಿಂದ ದೂರವಿರುವುದು, ಉತ್ತಮ ಆಹಾರ ಕ್ರಮ ಹಾಗೂ ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡರೆ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಲು ಸಾಧ್ಯ ಎಂದರು.

ಎಚ್ಚರಿಕೆ ಪತ್ರಿಕೆಯ ಸಂಪಾದಕ ವೈ.ಕೆ.ಸೂರ್ಯನಾರಾಯಣ ಮಾತನಾಡಿ, ಸರ್ಜಿ ಸಮೂಹ ಸಂಸ್ಥೆ, ಕೇವಲ ಚಿಕಿತ್ಸೆ ನೀಡಲು ಸೀಮಿತವಾಗದೆ, ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಪರಿಸರ ಸಂರಕ್ಷಣೆ ಚಟುವಟಿಕೆಗಳು, ಸಾಮಾಜಿಕ ಕಾರ್ಯ ಚಟುವಟಿಕೆಗಳಲ್ಲಿ, ವಿಶೇಷಚೇತನರ ಆರೈಕೆ ಹೀಗೆ ಸಮಗ್ರವಾಗಿ ಸಮಾಜಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಗ್ಲೆನ್ಮಾರ್ಕ್ಫಾರ್ಮಾದ ಅನಿಲ್ಬೇಗೂರು ಉಪಸ್ಥಿತರಿದ್ದರು.
–—

40 ವರ್ಷ ದಾಟಿದವರು ಎರಡು ವರ್ಷಕ್ಕೊಮ್ಮೆ ಹಾಗೂ 50 ವರ್ಷ ದಾಟಿದವರು ವರ್ಷಕ್ಕಮೊಮ್ಮೆ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಕ್ರಿಡಾಪಟುಗಳು ವೈದ್ಯರ ಸಲಹೆಯಂತೆ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕು.

-ಡಾ.ವಿಜೇತ, ಹೃದ್ರೋಗ ತಜ್ಞರು, ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ

=========
ಹೃದಯವು ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ. ಒಂದು ದಿನಕ್ಕೆ ಒಂದು ಲಕ್ಷ ಬಾರಿ ಬಡಿಯುವ ಹೃದಯ ಒಂದು ದಿನಕ್ಕೆ 7 ರಿಂದ 8 ಸಾವಿರ ರಕ್ತವನ್ನು ಪಂಪ್‌ ಮಾಡಿದರೆ, ವ್ಯಾಯಾಮ, ಜಿಮ್‌, ಓಟ, ಕ್ರೀಡೆ ಅಥವಾ ಇತರೆ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ 30 ರಿಂದ 35 ಲೀಟರ್‌ವರೆಗೂ ರಕ್ತವನ್ನು ಪಂಪ್‌ ಮಾಡುತ್ತದೆ. ಹಾಗಾಗಿ ಪ್ರತಿಯೊಬ್ಬರೂ ನಿರಂತರವಾಗಿ ವೈದ್ಯರನ್ನು ಭೇಟಿಯಾಗಿ ಹೃದಯದ ತಪಾಸಣೆ ಮಾಡಿಸಿಕೊಳ್ಳುವುದು ಒಳಿತು.

-ನಮಿತಾ ಸರ್ಜಿ, ನಿರ್ದೇಶಕರು, ಸರ್ಜಿ ಸಮೂಹ ಸಂಸ್ಥೆ.
–—

error: Content is protected !!