ಬೆಂಗಳೂರು, ಡಿಸೆಂಬರ್ 14: ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ  ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಜರುಗಿತು.
ಸಂಸದ ಬಿ.ವೈ.ರಾಘವೇಂದ್ರ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಮುಖ್ಯಮಂತ್ರಿಗಳ  ಅಪರಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಸಲಹೆಗಾರ ಎಂ. ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಸೆಲ್ವಕುಮಾರ್,  ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಮುಖ್ಯಾಂಶಗಳು
ವಿಮಾನ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಕಾಮಗಾರಿ ವೇಗ ಹೆಚ್ಚಿಸಲು ಸೂಚಿಸಲಾಯಿತು.
ಕಾಮಗಾರಿ ವೇಗ ಹೆಚ್ಚಿಸಲು 4 ಜಿ ಅನುಮತಿ ನೀಡಲು‌ ಸೂಚಿಸಲಾಯಿತು.
ರನ್ ವೇ ಯನ್ನು 1.2 ಕಿಲೋಮೀಟರ್ ನಿಂದ 2.1 ಕಿಲೋಮೀಟರ್ ಗೆ ಹೆಚ್ಚಿಸಲು ಅನುಮತಿ ನೀಡಲಾಯಿತು.
ಈಗಾಗಲೇ ಕಾಮಗಾರಿಗೆ 40 ಕೋಟಿ ಹಣವನ್ನು  ನೀಡಲಾಗಿದ್ದು ತಕ್ಷಣವೇ ಕೆಲಸ ಆರಂಭಿಸಬೇಕು.
 ಹೆಚ್ಚಿನ ಹಣಕಾಸು ಬೇಕಿದ್ದಲ್ಲಿ ಮುಂದಿನ‌ ದಿನಗಳಲ್ಲಿ ನೀಡಲಾಗುವುದು ಅಂತ ಭರವಸೆ ನೀಡಲಾಯಿತು.
ಇನ್ನು ಒಂದು ವಾರದೊಳಗೆ ಎಲ್ಲ ರೀತಿಯ ಪೇಪರ್ ವರ್ಕ್ ಮುಗಿಸಿ ಕೆಲಸ ಆರಂಭಿಸಲು ಸೂಚನೆ.
ಇನ್ನು 6 ತಿಂಗಳ ಒಳಗೆ ಶಿವಮೊಗ್ಗ ದಲ್ಲಿ ವಿಮಾನ ಹಾರಾಟ ಆರಂಭವಾಗಬೇಕು  ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಇನ್ನು ಸಿಗಂದೂರು ಸೇತುವೆಗೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿದ್ದು ಇದಕ್ಕೆ  ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ಲಿಯರೆನ್ಸ್ ತೆಗೆದುಕೊಳ್ಳಲು ಸೂಚಿಸಲಾಯಿತು
ಶಿವಮೊಗ್ಗ  ರೈಲ್ವೇ ಟರ್ಮಿನಲ್ ಗೆ ಸಂಬಂಧಿಸಿದಂತೆ ಕೋಟೆ ಗಂಗೂರಿನಲ್ಲಿ ಭೂ ಸ್ವಾಧೀನ ಪಡಿಸಿಕೊಳ್ಳಲು ಸೂಚಿಸಲಾಯಿತು
ಇವತ್ತು ಚರ್ಚೆ ನಡೆಸಿದ ಎಲ್ಲಾ ವಿಷಯಗಳನ್ನು ತ್ವರಿತವಾಗಿ ಜಾರಿಗೆ ತರಬೇಕು ಅಂತ ಅಂತಿಮವಾಗಿ ಅಧಿಕಾರಿಗಳಿಗೆ ಸೂಚಿಸಲಾಯಿತು.


error: Content is protected !!