ವಮೊಗ್ಗ, ಜೂನ್.4 : ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ. ಆರ್ ಅಂಬೇಡ್ಕರ್ ಹಾಗೂ ಇಂದಿರಾ ಗಾಂಧಿ (31 ಶಾಲೆಗಳು) ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಜೂನ್ 4 ರಿಂದ 13ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸಂಬಂಧಿಸಿದ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು ಪರೀಕ್ಷಾ ಕೇಂದ್ರಗಳಿಗೆ ಸಲಿಸುವಂತೆ ಸೂಚಿಸಲಾಗಿದೆ. ಜೂನ್ 18 ರ ಬೆಳಗ್ಗೆ 11 ರಿಂದ 12ರ ವರೆಗೆ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!