ಕಾರಿಪುರ ತಾಲೂಕು ಸಾಲೂರು ಗ್ರಾಮ ಪಂಚಾಯಿತಿ, ಆರೋಗ್ಯ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ವತಿಯಿಂದ ಸಾಲೂರಿನಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಗ್ರಾ.ಪಂ.ಅಧ್ಯಕ್ಷ ಸಿ.ಕೇಶವ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಗ್ರಾಮ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೆ.ಸಿ.ಶಾಂತಾಕುಮಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ನಾಗಲೀಕರ, ಡಾ||ಹರ್ಷವರ್ಧನ, ಶ್ರೀಮತಿ ವೀರಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಸೇರಿದಂತೆ ಅಂಗನವಾಡಿಯ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂಧಿ ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

error: Content is protected !!