ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಚೆನ್ನಗಿರಿ ತಾಲ್ಲೂಕು ಸೇವಾ ನಗರ ಗ್ರಾಮದಲ್ಲಿರುವ ರೆಗ್ಯುಲೇಟರಿ -2 ನಾಲ ನಿರ್ವಹಣಾ ಕೇಂದ್ರಕ್ಕೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ನಾಲ್ಕು ತಿಂಗಳು ಹಗಲು ರಾತ್ರಿ, ಬಿಸಿಲು ಮಳೆ ಲೆಕ್ಕಿಸದೆ ಬೆವರು ಹರಿಸಿ ನಾಟಿ ಮಾಡಿದ ಭತ್ತ, ರಾಗಿ ಇನ್ನು ಮುಂತಾದ ಬೆಳೆಗಳನ್ನು ಕಟಾವು ಮಾಡುವ ಸಮಯ ಹತ್ತಿರದಲಿದ್ದು, ಈ ಸಮಯದಲ್ಲಿ ನೀರಿನ ಅವಶ್ಯಕತೆ ಬಹಳಷ್ಟು ಇರುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಅಚ್ಚುಕಟ್ಟು ಭಾಗದ ಅನ್ನದಾತರು ಉತ್ತಮ ಫಸಲು ಪಡೆಯುವ ಮೂಲಕ ನಾಡಿಗೆ ಉಣಬಡಿಸಲಿದ್ದಾರೆ.


ಮೇಲಾಗಿ ಉತ್ತಮ ಬೆಳೆ ಪಡೆಯಬೇಕು, ಆರ್ಥಿಕವಾಗಿ ಸಬಲರಾಗಬೇಕು ಎಂಬ ಅಪಾರ ಹಂಬಲದೊಂದಿಗೆ ವಿವಿಧಡೆ ಸಾಲ ಮಾಡಿ ಬೀಜ, ಗೊಬ್ಬರ ತಂದು ನಾಟಿ ಮಾಡಿದ್ದಾರೆ. ಇಂತಹ ರೈತಾಪಿ ವರ್ಗದವರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಎಂದು ಭದ್ರಾ ಕಾಡಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನವೇ ನಾನು ತೀರ್ಮಾನ ಮಾಡಿದ್ದೇನೆ, ಅವರಿಗೆ ನೀರು ಸರಿಯಾದ ಪ್ರಮಾಣದಲ್ಲಿ ತಲುಪಿಲ್ಲ ಎಂದು ಒಂದೇ ಒಂದು ಕರೆ ಬಂದರೆ ರಾತ್ರಿ ನಿದ್ದೆ ಮಾಡುವುದಿಲ್ಲ ಎಂದು ತಮ್ಮ ಮನದಾಳದ ಮಾತನ್ನು ತೋರ್ಪಡಿಸಿದರು.

ನೀರಿನ ಗೇಜ್ ಪ್ರತಿಬಾರಿ ಸುಮಾರು 13.2ಅಡಿ ಇದ್ದರೆ ಮಾತ್ರ ಅಚ್ಚುಕಟ್ಟಿನ ಕೊನೆಯ ಭಾಗಗಳಿಗೆ ಸರಾಗವಾಗಿ ನೀರು ತಲುಪುತ್ತದೆ. ಆದರೆ ನೀರಿನ ಏರಿಳಿತದಿಂದ ಕಳೆದ ಎರಡು ದಿನಗಳಿಂದ ದಾವಣಗೆರೆ ಹಾಗೂ ಮಲೇಬೆನ್ನುರು ಅಚ್ಚುಕಟ್ಟು ವ್ಯಾಪ್ತಿಯ ಕೊನೆಯ ಗ್ರಾಮಗಳಿಗೆ ನೀರಿನ ನಿರ್ವಹಣೆಯಲ್ಲಿ ಕೊಂಚ ಮಟ್ಟಿನ ಏರಿಕೆಯಾಗಿ ತೊಂದರೆಯಾಗಿತ್ತು, ತಕ್ಷಣವೇ ಅಧಿಕಾರಿಗಳೊಂದಿಗೆ ದಾವಣಗೆರೆ ಹಾಗೂ ಮಲೇಬೆನ್ನುರು ಭಾಗಗಳಿಗೆ ನಾಲೆಯ ಮೂಲಕ ಜಲಾಶಯದ ನೀರು ವಿಭಜಿಸುವ “ರೆಗ್ಯುಲೇಟರಿ -2” ಕೇಂದ್ರಕ್ಕೆ  ಭೇಟಿ ನೀಡಿ ಸದರಿ ಗೇಜ್ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ರೈತರಿಗೆ ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ರೀತಿಯಲ್ಲಿ ತೊಂದರೆಯಾಗಲು ಅವಕಾಶ ಮಾಡಿಕೊಡುವುದಿಲ್ಲ, ಅಧಿಕಾರಿಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಮತ್ತೆಂದೂ ಗೇಜ್ ವ್ಯತ್ಯಾಸವಾಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಡಿ.ಬಿ.ಹಳ್ಳಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಸನ್ನ, ದಾವಣಗೆರೆ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರುದ್ರೇಶ್ ನಾಯ್ಕ್, ಕಿರಿಯ ಸಹಾಯಕ ಅಭಿಯಂತರರು ಜೊತೆಗಿದ್ದರು.

error: Content is protected !!