ಸಾಗರ : ತಾಲ್ಲೂಕಿನ ಆನಂದಪುರಂ ಸಮೀಪದ ರಾಷ್ಟ್ರೀಯ ಹೆದ್ದಾರಿ ಮುಂಬಾಳು ಕ್ರಾಸ್‍ನಲ್ಲಿ ಭಾನುವಾರ ಬೆಳಿಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಬಸ್ ಮುಂಬಾಳು ಕ್ರಾಸ್‍ನಲ್ಲಿ ವಿಪರೀತ ಮಳೆ ಸುರಿಯುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್‍ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಬಸ್ ಪಲ್ಟಿಯಾದ ತಕ್ಷಣ ಸ್ಥಳೀಯರು ಪ್ರಯಾಣಿಕರ ನೆರವಿಗೆ ಧಾವಿಸಿದ್ದಾರೆ.
ಬಸ್ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡವರನ್ನು ಆನಂದಪುರಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಆನಂದಪುರಂ ಉಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!