ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರೈತರಿಗೆ ಅಡಿಕೆ ಸಮಗ್ರ ಬೇಸಾಯ ಪದ್ಧತಿಗಳು ಹಾಗೂ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು

ಕುಲಪತಿಗಳಾದ ಡಾ. ಆರ್.ಸಿ. ಜಗದೀಶ ರವರು ಉದ್ಘಾಟಿಸಿ ಅನೇಕ ರೋಗಗಳು ಇತ್ತೀಚಿನ ದಿನಗಳಲ್ಲಿ ಅಡಿಕೆಯನ್ನು ಭಾದಿಸುತ್ತಿದ್ದು ಅವುಗಳನ್ನು ಸಮಗ್ರವಾಗಿ ನಿರ್ವಹಣೆ ಮಾಡಲು ಹಾಗೂ ಅಡಿಕೆಯಲ್ಲಿ ಮಿಶ್ರ ಬೆಳೆಯನ್ನು ಅನುಸರಿಸಿ ಹೆಚ್ಚಿನ ಆದಾಯ ಗಳಿಸಬಹುದು ಎಂದು ಕರೆ ನೀಡಿದರು,

ಕಾರ್ಯಕ್ರಮದಲ್ಲಿ ಡಾ. ಕೆ. ಟಿ. ಗುರುಮೂರ್ತಿ, ವಿಸ್ತರಣಾ ನಿರ್ದೇಶಕರು, ಡಾ. ಕೆ. ಸಿ. ಶಶಿಧರ, ಕುಲಸಚಿವರು ಹಾಗೂ ವಿಶೇಷಾಧಿಕಾರಿಗಳು, ಡಾ. ನಾಗರಾಜಪ್ಪ ಆಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೈತರಿಗೆ ಅಡಿಕೆಯಲ್ಲಿ ಸಮಗ್ರ ಬೇಸಾಯ ಪದ್ಧತಿಗಳು ಹಾಗೂ ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಯಿತು.

error: Content is protected !!