ಇಂದು ಗ್ರಾಮಾಂತರ ಕ್ಷೇತ್ರದ ಕುಂಸಿ ವ್ಯಾಪ್ತಿಯ ಕೊರಗಿ ಗ್ರಾಮದಿಂದ ಚೋರಡಿ ಗ್ರಾಮದ ವರೆಗೆ  ೧೦೦ ಲಕ್ಷರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಾಂತರ ಶಾಸಕರಾದ ಶ್ರೀ ಕೆ ಬಿ ಅಶೋಕ್ ನಾಯ್ಕ್ ಗುದ್ದಲಿ ಪೂಜೆ ನೆರವೇರಿಸಿದರು.
ನನ್ನ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಗ್ರಾಮ ಮೂಲಸೌಕರ್ಯದಿಂದ ವಂಚಿತವಾಗಬಾರದೆನ್ನುವ ದೃಷ್ಟಿಯಲ್ಲಿ ಕಳೆದ ಎರಡು ಮುಕ್ಕಾಲು ವರ್ಷಗಳಿಂದ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯಗತ್ಯವಾಗಿ ಬೇಕಾದ ರಸ್ತೆ, ಕುಡಿಯುವ ನೀರು ಮುಂತಾದ ಮೂಲಸೌಕರ್ಯಗಳನ್ನು ಒದಗಿಸುತ್ತಾ ಬಂದಿದ್ದೇನೆ. ಗ್ರಾಮೀಣ ಪ್ರದೇಶ ಅಭಿವೃದ್ದಿಯಾದರೆ ಮಾತ್ರ ಅಟಲ್ ಬಿಹಾರಿ ವಾಜಪೇಯಿ ರವರ ಕನಸು ನನಸಾಗಲು ಸಾಧ್ಯ.ಕಚ್ಚಾ ರಸ್ತೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡುವ ಮೂಲಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಹಳ್ಳಿಗಳಲ್ಲಿ ಸ್ವಚ್ಛ ಸುಂದರ ರಸ್ತೆ ನಿರ್ಮಾಣ ಮಾಡುವದು ನಮ್ಮ ಗುರಿಯಾಗಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ತಂದು ಪ್ರತಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರ

error: Content is protected !!