ಶಿವಮೊಗ್ಗ, ಜೂನ್- 06 : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸರ ಅಧ್ಯಯನ ಕೇಂದ್ರ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆ ಇವರುಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ 2019ರ ಅಂಗವಾಗಿ ಜೂನ್ 11 ಮತ್ತು 12 ರಂದು ಸಾಗರ ರಸ್ತೆಯ ಆಟೋ ಕಾಂಪ್ಲೆಕ್ಸ್ ಕೈಗಾರಿಕಾ ಪ್ರದೇಶದಲ್ಲಿರುವ ಪ್ಲಾಟ್ ನಂ. 156ರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಆವರಣದಲ್ಲಿ ” ವಾಯು ಮಾಲಿನ್ಯ ಹೆಮ್ಮೆಟ್ಟಿಸಿ” ಎಂಬ ಘೋಷವಾಕ್ಯಕ್ಕೆ ಸಂಬಂಧಪಟ್ಟಂತೆ ಪ್ರಬಂಧ ಸ್ಪರ್ಧೆ, ಸಮೂಹ ಪರಿಸರ ಗೀತ ಗಾಯನ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿದೆ.

error: Content is protected !!