ಭದ್ರಾ ಕಾಡ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಪ್ರಾಧಿಕಾರದ ವ್ಯಾಪ್ತಿಗೆ ಬರುವ ಹಿರಿಯೂರು ಜಿಲ್ಲಾ ಪಂಚಾಯತ್ ಗೊಂದಿ ಗ್ರಾಮದಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಗೊಂದಿ ಅಣೆಕಟ್ಟನ್ನು ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರೊಂದಿಗೆ, ಸದಸ್ಯರೊಂದಿಗೆ, ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ, ಗ್ರಾಮದ ರೈತರೊಂದಿಗೆ  ವೀಕ್ಷಣೆ ಮಾಡಿದರು.

ಈ ಸಂದರ್ಭ ಅಣೆಕಟ್ಟೆಯನ್ನು ಉನ್ನತಿ ಕರಿಸುವುದರಿಂದ ಸುತ್ತಲಿರುವ ಹನ್ನೊಂದು ನೀರು ಬಳಕೆದಾರರ ಸಹಕಾರ ಸಂಘಗಳಿಗೆ, ಸಾವಿರಾರು ರೈತರಿಗೆ ಅನುಕೂಲವಾಗುತ್ತದೆ..ಮಾನ್ಯ ಮುಖ್ಯಮಂತ್ರಿಗಳಿಗೆ, ಸಂಸದರಿಗೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗುವುದು, ರೈತರ ಹಿತಾಸಕ್ತಿಯೇ ನನ್ನ ಮೊದಲ ಆದ್ಯತೆ ನಿಮ್ಮ ಮನವಿಯನ್ನು ನಾನು ಪುರಸ್ಕಿರಿಸುತ್ತೇನೆ ಎಂದು ಭರವಸೆ ನೀಡಿದರು.ಮುಂದುವರೆದು ಗೊಂದಿ ಅಣೆಕಟ್ಟು ಅಭಿವೃದ್ದಿ ಪಡಿಸುವುದ ರಿಂದ ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಬಲ ನೀಡಿದಂತಾಗುತ್ತದೆ, ನೂರಾರು ಜನರ ನಿತ್ಯ ಜೀವನಕ್ಕೆ ಅನುಕೂಲ ವಾಗುತ್ತದೆ.. ಜೊತೆಗೆ ಸ್ಥಳೀಯ ಆಡಳಿತಕ್ಕೆ, ರಾಜ್ಯ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ಆದಾಯ ಕೂಡ ಬರುತ್ತದೆ.. ಇದನ್ನು ಸರ್ಕಾರದ ಗಮನಕ್ಕೆ ತಂದು ಅಭಿವೃದ್ದಿ ಪಡಿಸುತ್ತೇನೆ ಎಂದು ಶಪಥ ಮಾಡಿದರು.ಈ ಸಂದರ್ಭದಲ್ಲಿ ಕಾಡ ನಿರ್ದೇಶಕರಾದ ಷಡಕ್ಷರಿ ಅವರು ಜೊತೆಗಿದ್ದರು.

error: Content is protected !!