ಶಿವಮೊಗ್ಗ, ಮೇ.15 : ಆಗುಂಬೆ ಘಾಟಿಯಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮೇ 16ರಿಂದ ಲಘು ವಾಹನಗಳಾದ ಮಿನಿ ಬಸ್‍ಗಳು, ಜೀಪು, ವ್ಯಾನು, ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶಿಸಿದ್ದಾರೆ.
ಕಾಂಕ್ರೀಟ್ ಕಾಮಗಾರಿಯು ಕ್ಯೂರಿಂಗ್ ಆಗಲು 18ದಿನಗಳ ಅವಶ್ಯಕತೆ ಇರುವುದರಿಂದ ಇನ್ನುಳಿದ ಎಲ್.ಸಿ.ವಿ ವಾಹನಗಳಿಗೆ ಜೂನ್ ಒಂದರಿಂದ ಅನುಮತಿ ನೀಡಲಾಗುವುದು. ಅದುವರೆಗೆ ಸದರಿ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಹೊಸಂಗಡಿ-ಸಿದ್ದಾಪುರ-ಕುಂದಾಪುರ-ಉಡುಪಿ ಹಾಗೂ ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ ಮೂಲಕ ಸಂಚರಿಸಲು ಅವಕಾಶ ಮಾಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!