ಶಿವಮೊಗ್ಗ; ಜನವರಿ 29 : ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ಶ್ರೀಮತಿ ಸಿ.ಎಸ್.ಅನುಸೂಯ ಅವರು ಇಲಾಖೆಯಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ರೂ.25,000/-ಗಳ ನಗದನ್ನು ಜನವರಿ 26ರಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ರೂಢಬಾಯಿ ವಾಲ ಇವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು

error: Content is protected !!