ಶಿವಮೊಗ್ಗ. ಮೇ 10 : ಮೇ 29ರಂದು ನಡೆಯಬೇಕಾಗಿದ್ದ ಸೊರಬ ಪಟ್ಟಣ ಪಂಚಾಯಿತಿ ಚುನಾವಣಾ ಪ್ರಕ್ರಿಯೆಯನ್ನು ನಾಲ್ಕು ವಾರಗಳ ಕಾಲ ತಡೆಹಿಡಿಯುವಂತೆ ಕರ್ನಾಟಕ ರಾಜ್ಯ ಉಚ್ಛನ್ಯಾಯಾಲಯವು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಧ್ಯಂತರ ಆದೇಶ ನೀಡಿದೆ.
ಈ ಸಂಬಂಧ ಸದರಿ ಆದೇಶದ ಕುರಿತು ಸೂಕ್ತ ಮಾರ್ಗದರ್ಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಕೋರಲಾಗಿತ್ತು. ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಸೊರಬ ಪಟ್ಟಣ ಪಂಚಾಯಿತಿಗೆ ಇಂದಿನಿಂದ ಅನ್ವಯವಾಗುವಂತೆ ಚುನಾವಣಾ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!